WEL COME TO KANAKAGIRI UTSAV 2013

ಗುರುವಾರ, ಜನವರಿ 31, 2013

ಫೆ.೦೨ ರಂದು ಮುಖ್ಯಮಂತ್ರಿಗಳಿಂದ ಕನಕಗಿರಿ ಉತ್ಸವ ಉದ್ಘಾಟನೆ


ಕೊಪ್ಪಳ ಜ. : ಜಿಲ್ಲಾಡಳಿತ, ಜಿ.ಪಂ. ಕೊಪ್ಪಳ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಕನಕಗಿರಿ ಉತ್ಸವದ ಉದ್ಘಾಟನಾ ಕಾರ್ಯಕ್ರಮ ಫೆ.೦೨ ರಂದು ಸಂಜೆ ೬.೦೦ ಗಂಟೆಗೆ ಕನಕಗಿರಿಯ ಕನಕರಾಯ ವೇದಿಕೆಯಲ್ಲಿ ಜರುಗಲಿದೆ. ಉತ್ಸವದ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ನೆರವೇರಿಸುವರು. ಅಧ್ಯಕ್ಷತೆಯನ್ನು ಕನಕಗಿರಿ ಶಾಸಕ ಶಿವರಾಜ ಎಸ್. ತಂಗಡಗಿ ಅವರು ವಹಿಸುವರು. ಸಮಾರಂಭದ ದಿವ್ಯ ಸಾನಿಧ್ಯವನ್ನು ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಕನಕಗಿರಿ ಸಂಸ್ಥಾನ ಮಠದ ಶ್ರೀ ಚನ್ನಮಲ್ಲ ಮಹಾಸ್ವಾಮಿಜಿ ಸ್ವರ್ಣಗಿರಿ, ಸುಳೆಕಲ್ಲ ಬೃಹನ್ಮಠದ ಶ್ರೀ ಭುವನೇಶ್ವರ ತಾತನವರು, ಅರಳಿಹಳ್ಳಿಯ ಬೃಹನ್ಮಠದ ಶ್ರೀ ಗವಿಸಿದ್ದೇಶ್ವರ ತಾತನವರು ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ, ರಾಜ್ಯ ಸಣ್ಣ ನೀರಾವರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ, ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆ ಸಚಿವ ಬಾಲಚಂದ್ರ ಜಾರಕಿಹೊಳಿ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಸಣ್ಣ ಕೈಗಾರಿಕೆ ಸಚಿವ ನರಸಿಂಹ ನಾಯಕ್ (ರಾಜೂಗೌಡ) ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಿವನಗೌಡ ನಾಯಕ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ರಾಘವೇಂದ್ರ ಹಿಟ್ನಾಳ, ಸಂಸದ ಶಿವರಾಮಗೌಡ, ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಾಪುರ, ಪರಣ್ಣ ಮುನವಳ್ಳಿ, ಸಂಗಣ್ಣ ಕರಡಿ, ಈಶಣ್ಣ ಗುಳಗಣ್ಣವರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಹಾಲಪ್ಪ ಆಚಾರ, ಅಮರನಾಥ ಪಾಟೀಲ್, ಹೈದ್ರಾಬಾದ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ ಅಧ್ಯಕ್ಷ ಮಹಾಂತಗೌಡ ಪಾಟೀಲ್, ಕಾಡಾ ಅಧ್ಯಕ್ಷ ಹೆಚ್. ಗಿರೇಗೌಡ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣಮ್ಮ ಕಂದಕೂರಪ್ಪ, ಗಂಗಾವತಿ ತಾ.ಪಂ. ಅಧ್ಯಕ್ಷ ಕೆ. ಬಸವರಾಜ ಹುಲಿಯಪ್ಪ, ಜಿ.ಪಂ. ಸದಸ್ಯ ಗಂಗಣ್ಣ ಎಂ.ಸಮಗಂಡಿ, ತಾ.ಪಂ.ಸದಸ್ಯರಾದ ಹೊನ್ನೂರಸಾಬ ಮೇಸ್ತ್ರಿ, ಸರ್ವಮಂಗಳ ಎಮ್.ಭೂಸನೂರಮಠ, ಕನಕಗಿರಿ ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ಆಂಜನೇಯ, ಗಂಗಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಹೆಚ್.ಎಮ್. ತಿಪ್ಪೇರುದ್ರಸ್ವಾಮಿ ಸೇರಿದಂತೆ ಜಿಲ್ಲಾಧಿಕಾರಿ ತುಳಸಿ ಮದ್ದಿನೇನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಅಣ್ಣಿಗೇರಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್. ರಾಜಾರಾಂ ಸೇರಿದಂತೆ ಜಿ.ಪಂ., ತಾ.ಪಂ., ಗ್ರಾ.ಪಂ. ಸರ್ವ ಸದಸ್ಯರು ಭಾಗವಹಿಸುವರು. ಫೆ. ೦೩ ರಂದು ಸಮಾರೋಪ : ಕನಕಗಿರಿ ಉತ್ಸವದ ಸಮಾರೋಪ ಸಮಾರಂಭ ಫೆ. ೦೩ ರಂದು ರಾತ್ರಿ ೯.೩೦ ಗಂಟೆಗೆ ಕನಕಗಿರಿಯ ಕನಕರಾಯ ವೇದಿಕೆಯಲ್ಲಿ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪ ನಿರಾಣಿ ಅವರು ಸಮಾರೋಪ ಭಾಷಣ ಮಾಡುವರು. ಸಂಸ್ಥಾನ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವನ್ನು ವಹಿಸುವರು. ಅಧ್ಯಕ್ಷತೆಯನ್ನು ಶಾಸಕ ಶಿವರಾಜ ಎಸ್.ತಂಗಡಗಿ ಅವರು ವಹಿಸುವರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಅಧ್ಯಕ್ಷೆ ರಂಗಮ್ಮ ಆಂಜನೇಯ, ಜಿ.ಪಂ.ಸದಸ್ಯ ಗಂಗಣ್ಣ ಎಮ್.ಸಮಗಂಡಿ, ತಾ.ಪಂ.ಸದಸ್ಯರಾದ ಹೊನ್ನೂರಸಾಬ ಮೇಸ್ತ್ರಿ, ಸರ್ವಮಂಗಳ ಎಮ್.ಭೂಸನೂರಮಠ ಸೇರಿದಂತೆ ಗ್ರಾ.ಪಂ.ಸರ್ವ ಸದಸ್ಯರು ಭಾಗವಹಿಸುವರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ